Skip to main content

 ಕೆಲವರಿರುತ್ತಾರೆ. ನಮ್ಮ ಸುತ್ತಲೇ ಸುತ್ತುತ್ತಾ ನಾವು ಮಾಡಲು ಹೊರಡುವ ಕೆಲಸಗಳಲ್ಲೆಲ್ಲಾ ಹುಳುಕು ಹುಡುಕುತ್ತಾ, ಸಣ್ಣದಾಗಿ ವ್ಯಂಗ್ಯವಾಡುತ್ತಾ ನಮ್ಮ ಹುಮ್ಮಸ್ಸನ್ನೇ ಕಳೆದುಬಿಡುತ್ತಾರೆ. 


ನನ್ನ ಸ್ನೇಹಿತನೊಬ್ಬನಿದ್ದ. ನಾನೇನು ಮಾಡಲು ಹೊರಟರೂ ಅಯ್ಯೋ ನಿಂಗೇನ್ ಹುಚ್ಚು ಮಾರಾಯಾ ಇಷ್ಟು ಬಂಡವಾಳ ಸುರಿದು ಇದನ್ನ್ಯಾಕೆ ಮಾಡೋಕೆ ಹೋದೆ !? ಇದು ನಮ್ಮಪ್ಪನಾಣೆ ಆಗುವಂತದ್ದಲ್ಲ ಬಿಡು ಬಿಡು... ಎಂದು ಅದೇನೋ ವ್ಯಂಗ್ಯವೋ, ವಿಕಾರವೋ ಆದ ಧಾಟಿಯಲ್ಲಿ ಶರಾ ಬರೆದುಬಿಡುತ್ತಿದ್ದ. ನಾನೋ ಸೋತು ಸುಣ್ಣವಾಗಿ ಏದುಸಿರು ಬಿಡುತ್ತಿದ್ದವನು, ಇವನ ಮಾತು ಕೇಳಿ ಒಳಗೇ ಮತ್ತೊಂದಷ್ಟು ಕುಸಿದು ಹೋಗುತ್ತಿದ್ದೆ. ಥತ್ ನಾನಿದನ್ನ ಮಾಡಬಾರದಿತ್ತಾ...? ಎಡವಿಬಿಟ್ಟೆನಾ...? ಎಂದೆಲ್ಲಾ ಯೋಚನೆಗೆ ಬೀಳುತ್ತಿದ್ದೆ. ನನ್ನ ಗ್ರಹಚಾರವೋ ಮತ್ತಿನ್ನೇನು ಸುಡುಗಾಡೋ ಮಾಡುತ್ತಿದ್ದ ಕೆಲಸಗಳೂ ಕಡೇ ಹಂತದಲ್ಲಿ‌ ನೆಗೆದುಬೀಳುತ್ತಿದ್ದವು. 

ಕಡೆ ಕಡೆಗೆ ನನ್ನ ಪ್ರತಿಯೊಂದು ಕೆಲಸದಲ್ಲಿಯೂ ಅವನು ನೆಗೆಟಿವ್ ಒಪೀನಿಯನ್'ಗಳನ್ನು ಹೇರತೊಡಗಿದಾಗ ನನಗೆ ಉಸಿರುಗಟ್ಟತೊಡಗಿ ಒಂದು ದಿನ ಇಂಥದ್ದೇ ಯಾವುದೇ ವಿಚಾರದಲ್ಲಿ‌ ಕಂಡಾಪಟ್ಟೆ ಜಗಳಾಡಿ ದೂರ ಸರಿಸಿಬಿಟ್ಟೆ. ಅದೇನೋ ಅವತ್ತಿನಿಂದ ಬೆನ್ನು ಹತ್ತಿದ್ದ ಬೇತಾಳವನ್ನು ಕೆಳಗೆ ಜಾಡಿಸಿದಂತಹ ಹಗುರ ಭಾವ.! 

ಇಂತಹ ಹತ್ತಾರು ಜನ ನಮ್ಮ ಸುತ್ತಲಿರುತ್ತಾರೆ ಇಂಥವರನ್ನು ಸಾಧ್ಯವಾದಷ್ಟು ಕೊಡವಿ ದೂರವಿಡುವುದು ನಮ್ಮ ಮನಸ್ಸಿನ ಆರೋಗ್ಯಕ್ಕೆ ತುಂಬಾ ಅಗತ್ಯ. 

ನಾವೂ ಕೂಡಾ ಅಷ್ಟೆ, ನಮ್ಮವರ ಕೆಲಸಗಳಲ್ಲಿ ಸುಖಾಸುಮ್ಮನೆ ತಲೆ ತೂರಿಸದೇ, ಕಾಲೆಳೆಯದೇ, ಅವರ ರೆಟ್ಟೆಯ ಕಸುವನ್ನು ಕಮ್ಮಿ ಮಾಡದೇ ನಮ್ಮ ಪಾಡಿಗಿರುವುದೂ ಕೂಡಾ ನಾವವರಿಗೆ ಮಾಡುವ ಸಹಾಯಗಳಲ್ಲೊಂದು. ಸಾಧ್ಯವಾದರೆ ಅವರ ಕಷ್ಟಗಳಿಗೆ ಹೆಗಲು ಕೊಟ್ಟು ಆಗದಿದ್ದರೆ ತೆಪ್ಪಗಿದ್ದುಬಿಟ್ಟರೆ ನಮ್ಮ ತೂಕವೂ ಹೆಚ್ಚುತ್ತದೆ. 

ಸೋಲಿನ ನೋವು ಸೋತವರಿಗಷ್ಟೇ ಗೊತ್ತಿರುತ್ತದೆ.

Comments

Popular posts from this blog

Coffee culture V/S Coffee industry

 Coffee blossoms in Brazil. An anti Nature cultivation.  ಕೆಲವು ವರ್ಷಗಳ ಹಿಂದೆ ನಮ್ಮ ಚಿಕ್ಕಮಗಳೂರಿನ ಸುತ್ತಮುತ್ತಲಿನಲ್ಲಿ ಕೆಲವರು ಬ್ರೆಜಿಲ್ ಮಾದರಿಯ ಕಾಫಿ ಬೆಳೆಯುತ್ತೇವೆಂದು ಓಡಾಡತೊಡಗಿದರು. ಬ್ರೆಜಿಲ್ ಮಾದರಿಯಲ್ಲಿ ಕಡಿಮೆ ಖರ್ಚು, ಕಾರ್ಮಿಕರಹಿತವಾಗಿ ಯಂತ್ರಗಳ ಮೂಲಕ ಕುಯ್ಲು ಹಾಗೂ ಕಂಡು ಕೇಳರಿಯದಷ್ಟು ಇಳುವರಿಯಂತೆ...! ಎಂಬೆಲ್ಲಾ ಮಾತುಗಳು ಹರಿದಾಡತೊಡಗಿದವು.  ಬ್ರೆಜಿಲ್ ಮಾದರಿಯೆಂದರೆ ಹೆಂಗೆ ಬೆಳೆಯುತ್ತಾರೆ !?  ಒಮ್ಮೆ ಹೋಗಿ ನೋಡಬೇಕೆಂಬ  ಕುತೂಹಲ ಪ್ರಾರಂಭವಾಯಿತು.  ಒಂದು ದಿನ ಕಳಸಕ್ಕೆ ಹೋಗುತ್ತಿರುವಾಗ ಬಾಳೆಹೊಳೆಯ ಬಳಿ ತುಂಬಾ ಹಳೆಯ ರೋಬಸ್ಟಾ ತೋಟವೊಂದನ್ನು ಮರಗಳ ಸಮೇತ ಕಡಿದು ಬಟಾಬಯಲಾಗಿಸಿ ಸಾಲು ಸಾಲು ಪಾತಿಗಳಂತೆ   ಮಾಡಿ ಒಂದರ ಪಕ್ಕ ಒಂದರಂತೆ ಗಿಡಗಳನ್ನು ನೆಟ್ಟು ಹನಿ ನಿರಾವರಿ ಪೈಪುಗಳನ್ನು ಎಳೆಯುತ್ತಿದ್ದರು. ನೋಡಲು ಒಂದು ನಮೂನೆಯ ಟೀ ತೋಟದ ಮಾದರಿಯಲ್ಲಿತ್ತು. ಚಹಾ ತೋಟದಲ್ಲಾದರೂ ನಡುವೆ ಅಲ್ಲಲ್ಲಿ ಮರಗಳಿರುತ್ತವೆ ಇಲ್ಲಿ ಒಂದೇ ಒಂದು ಮರವನ್ನೂ ಬಿಡದಂತೆ ಕಡಿದುಹಾಕಿದ್ದರು.! ತೋಟದ ಸಮೀಪದಲ್ಲಿದ್ದ ಅಂಗಡಿಯೊಂದರಲ್ಲಿ, ಇದೇನು ಬೆಳೆಸುತ್ತಿದ್ದಾರೆ ? ಎಂದು ವಿಚಾರಿಸಿದೆ. 'ಎಂತದಾ ಬ್ರೆಜಿಲ್ ಕಾಪಿ ಬೆಳಿತಾರಂತೆ ಮಾರ್ರೆ ಭಯಂಕರ ಕಾಪಿ ಬಿಡ್ತದಂತೆ ಇನ್ಮೇಲೆ ಮಿಸಿನ್ನಲ್ಲಿ ಹಣ್ ಕುಯ್ಯದಂತೆ' ಎಂದರು. ಕೆಲವೇ ದಿನಗಳ ಹಿಂದೆ ಯಾವ ಬ್ರೆಜಿಲ್ ಮಾದರಿಯನ್ನು ನೋಡಬೇಕೆ...
 ಬೆಂಗಳೂರಿಗೆ ಹೊರಡುವ ಬಹುತೇಕ ನಿರುದ್ಯೋಗಿಗಳ ಚಿಂತೆ ಕೆಲಸ ಸಿಗುತ್ತದಾ ?  ಎನ್ನುವುದಕ್ಕಿಂತ ಉಳಿಯಲು ಕೊಠಡಿ ಸಿಗುತ್ತದಾ ? ಎನ್ನುವುದು. ಕಾರಣ ಪುಡಿಗಾಸು ಇಟ್ಟುಕೊಂಡು ಹೊರಡುವ ಹುಡುಗರು (ಬಹುತೇಕ ಹುಡುಗಿಯರು ಅದರಲ್ಲಿ ಜಾಣೆಯರು. ಕೆಲಸ , ಕೋಣೆಯನ್ನು  ಖಚಿತ ಪಡಿಸಿಕೊಂಡೇ ಹೊರಡುತ್ತಾರೆ.! ) ಸ್ವಂತದ ಕೋಣೆ ಬಾಡಿಗೆ ಪಡೆಯುವಷ್ಟು ಶಕ್ತಿಯಿರುವುದಿಲ್ಲ. ಹಾಗಾಗಿ ಬೆಂಗಳೂರಿಗೆ ಕೆಲಸ ಹುಡುಕಿ ಹೊರಡುವುದು ಒಂದು ರೀತಿಯ ಅನಿಶ್ಚಿತತೆಯ ಪ್ರಯಾಣ. ಇನ್ನು ಈ ಪ್ರಾಣಿ ಬೆಂಗಳೂರಿಗೆ ಕೆಲಸ ಹುಡುಕಿಕೊಂಡು ಬಂದಿದೆ ಎಂಬ ಮಾಹಿತಿ ಮೊದಲೇ ಬೆಂಗಳೂರಿಗೆ ಹೋಗಿ ಸೇರಿಕೊಂಡವರಿಗೆ ತಿಳಿದರೆ ಅವರು ಸತ್ತರೂ ಫೋನ್ ರಿಸೀವ್ ಮಾಡುವುದಿಲ್ಲ.  ಇನ್ನು ಕೆಲವರು ಕರೆ ಮಾಡಿದಾಗಲೆಲ್ಲಾ ರೂಮಿಗೇ ಬರದೇ ಹಗಲೂ ರಾತ್ರಿ ಡ್ಯೂಟಿ ಮಾಡುತ್ತಲೇ ಇರುತ್ತಾರೆ.!  ಬಹುತೇಕ ಹುಡುಗರಿಗೆ ಸುಳ್ಳಿನ ಸರಪಳಿ ಅನಿವಾರ್ಯವಾಗಿದ್ದರೆ ಇನ್ನು ಕೆಲವರಿಗೆ ಊರಿನ ಮತ್ತೊಂದು ಮಿಕ ಬೆಂಗಳೂರು ಸೇರಿ ಉದ್ದಾರಾಗುವುದು ಹೊಟ್ಟೆ ಉರಿಯ ಮ್ಯಾಟರ್ರು.  ಬೆಂಗಳೂರಿಗೆ ಹೋದ ಹೊಸತು. ಹೋಗುವ ಮೊದಲು ನಾಗಮಂಗಲ ಕಡೆಯ ಗೆಳೆಯನೊಬ್ಬನ ಕೋಣೆಯನ್ನು ಖಚಿತ ಪಡಿಸಿಕೊಂಡಿದ್ದೆ. 'ಅಯ್ಯೋ ಬಾ ಮಗಾ ನಾನಿದೀನಿ...' ಎಂದು ಥೇಟ್ ಕೃಷ್ಣ ಪರಮಾತ್ಮನ ಶೈಲಿಯಲ್ಲಿ ಅಭಯ ನೀಡಿದ್ದ. ಹೋಗಿ  ಇಳಿದ ನಂತರ ಆ ದರವೇಸಿಗೆ ಅದೇನಾಯ್ತೋ ಮುಖ ಗಂಟು ಹಾಕಿಕೊಂಡೇ ಸುಂಕದ ಕಟ್ಟೆಯಾಚೆಗಿನ ಅವನ ಮನ...

ಕೀಟ ಸಾಮ್ರಾಜ್ಯ ಹಾಗೂ ಆಧುನಿಕ ಕೃಷಿ

 ಮೊನ್ನೆ ಸಹಜ ಕೃಷಿ ಪದ್ಧತಿಯಲ್ಲಿ ಅಡಿಕೆ ಬೆಳೆಯುತ್ತಿರುವ ಶ್ರೀಯುತ. ಚಂದ್ರಶೇಖರ್ ಅವರ ತೋಟಕ್ಕೆ ಹೋಗಿದ್ದೆ. ಜೀವಾಮೃತವನ್ನಷ್ಟೇ ಬಳಸುತ್ತಿರುವ ಅವರು ಹನ್ನೆರಡು ವರ್ಷಗಳಿಂದ ಮಣ್ಣಿಗೆ ರಾಸಾಯನಿಕ ಗೊಬ್ಬರವನ್ನೇ ಸೋಕಿಸಿಲ್ಲವಂತೆ. ಆದರೂ ಸಹ ಇತರೇ ಬೆಳೆಗಾರರಿಗಿಂತ 20-30% ಹೆಚ್ಚು ಫಸಲು ತೆಗೆಯುತ್ತಿದ್ದಾರಂತೆ. ಅಡಿಕೆಯ ನಡುವೆ  ಬೆಳೆದಿರುವ ಎರಡು ವರ್ಷ ವಯಸ್ಸಿನ ರೋಬಸ್ಟಾ ಕಾಫಿ ಗಿಡಗಳು ನಾಲ್ಕು ವರ್ಷದ ಗಿಡಗಳಂತೆ ಬೆಳೆದಿವೆ.  ಕಳೆ, ಕೀಟ ನಾಶಕಗಳನ್ನು ಬಳಸುವುದರಿಂದ ಕೇವಲ‌ ಕಳೆಯನ್ನಷ್ಟೇ ಅಲ್ಲ, ಕೀಟ ಜಗತ್ತನ್ನೇ ಸರ್ವನಾಶ ಮಾಡುತ್ತಿದ್ದೇವೆನ್ನುವ ಕಿಂಚಿತ್ತು ಅರಿವಿಲ್ಲದ ರೈತರ ಬಗ್ಗೆ ಅವರು ಆತಂಕಗೊಂಡರು.  ನಾನು ಬರೆದಿರುವುದನ್ನು ಓದುವ ಕೃಷಿಕರು ಒಂದು ಕ್ಷಣ ಆಲೋಚಿಸಿ ನೋಡಿ. ರಾಸಾಯನಿಕ ವಿಷವನ್ನು ಬಳಸಿ ನಾವು ಕೊಲ್ಲುತ್ತಿರುವುದಾದರೂ ಯಾವುದನ್ನು!?  ಕಳೆಗೆ ಸಿಂಪಡಿಸುವ ರಾಸಾಯನಿಕವು ಕಳೆಯಿಂದ ನೆಲಕ್ಕಿಳಿದು ಕಣ್ಣಿಗೆ ಕಾಣದ, ಜೀವ ವೈವಿಧ್ಯದ ಅಮೂಲ್ಯ ಭಾಗವಾದ ಲಕ್ಷಾಂತರ, ಕೋಟ್ಯಾಂತರ ಕ್ರಿಮಿ, ಕೀಟಗಳನ್ನು ಅನಾಮತ್ತು ಕೊಲ್ಲುತ್ತಿರುವುದರ ಬಗ್ಗೆ ಔಷಧಿಯ ಹೆಸರಿನಲ್ಲಿ ಹಣ್ಣು, ಸೊಪ್ಪು, ತರಕಾರಿಯಿಂದ್ಹಿಡಿದು ತಿನ್ನುವ ಅನ್ನಕ್ಕೂ ವಿಷವಿಕ್ಕುತ್ತಿರುವ ನಾವು ಯೋಚಿಸಿದ್ದೇವೆಯಾ ? ಯೋಚಿಸುತ್ತೇವೆಯಾ ?  ನಾವು ಔಷಧವೆಂದು ಬಳಸುತ್ತಿರುವ ರಾಸಾಯನಿಕವು ಔಷಧಿಯೇ ಆಗಿದ್ದಿದ್ದಲ್ಲಿ ನಮ್ಮ ತೋಟ, ನಮ್ಮ ಹೊ...