Skip to main content

 ಮನುಷ್ಯ ಪ್ರತೀ ಬಾರಿ ಸೋತಾಗಲೂ ಕನಿಷ್ಟ ಐದು ವರ್ಷ ಹಿಂದಕ್ಕೆ ಹೋಗಿಬಿಡುತ್ತಾನೆ. ಪ್ರತೀ ಸೋಲು ದೈಹಿಕವಾಗಿ ವೃದ್ದಾಪ್ಯದೆಡೆಗೆ ದೂಡಿದರೆ, ಮಾನಸಿಕವಾಗಿ ಕುಬ್ಜನನ್ನಾಗಿಸುತ್ತದೆ. 


ಸೋತ ವ್ಯಕ್ತಿಯ ಸುತ್ತಲಿನ ಗೆಳೆಯರು, ಸಮವಯಸ್ಕರು, ಕಿರಿಯರು ಆತನನ್ನು ಹಿಂದಕ್ಕೆ ಸರಿಸಿ ಹಲವು ಮೈಲಿಗಳಷ್ಟು ದೂರ ಮುಂದೆ ಹೋಗಿಬಿಟ್ಟಿರುತ್ತಾರೆ. ಆಗಲೇ ಮನುಷ್ಯ ಆಮೆಯಂತಾಗಿಬಿಡುವುದು... ಸೋಲಿಗೆ ಹೆದರಿ,  ಸಮಾಜಕ್ಕೆ ಅಂಜಿ, ಯಾರನ್ನಾದರೂ ಎದುರುಗೊಳ್ಳುವ ಅವಕಾಶವನ್ನು ತಪ್ಪಿಸಲೆತ್ನಿಸುತ್ತಾ ಏಕಾಂತದೊಳಗೆ ತಲೆ ಹುದುಗಿಸಿಕೊಂಡುಬಿಡುತ್ತಾನೆ... 


ಇತ್ತ ದರವೇಸಿ ಸೋಲು ಕೂಡಾ ಸೋತವನ ಮೇಲೆಯೇ ಮತ್ತೆ ಮತ್ತೆ ದಾಳಿಯಿಡತೊಡಗುತ್ತದೆ. ಹಣಕಾಸು, ಉದ್ಯೋಗ, ವ್ಯವಹಾರ, ಪ್ರೀತಿ, ಮದುವೆಯಂತಹ ವಿಷಯಗಳಲ್ಲಿ ಮತ್ತೆ ಮತ್ತೆ ಕಾಲೆಳೆದು ಬೀಳಿಸತೊಡಗುತ್ತದೆ.


ಅಂಥದ್ದೊಂದು ಯಾತನೆ ಅನುಭವಿಸಿದವರಿಗೇ ಗೊತ್ತು. ದಿನನಿತ್ಯದ ಖರ್ಚುಗಳನ್ನು ತೂಗಿಸಲು, ತೆಗೆದುಕೊಂಡ ಸಾಲ ತೀರಿಸಲು ಪರದಾಡುವಾಗ, ಮದುವೆಗೆ ಹುಡುಗಿ ಸಿಗದೇ ವಯಸ್ಸು ಮೀರುವಾಗ, ಹಿಡಿದ ಕೆಲಸಗಳು ಹೊಳೆಯಲ್ಲಿನ ಹುಣಸೆ ಹಣ್ಣಾದಾಗ, ತನಗಿಂತ ಕಡಿಮೆ ಓದಿದ, ಕಡಿಮೆ ಬುದ್ದಿ ಮತ್ತೆಯ, ಕಡಿಮೆ ಯೋಗ್ಯತೆಯ, ಕಡಿಮೆ ವಯಸ್ಸಿನ , ತನ್ನಿಂದಲೇ ಸಹಾಯ ಪಡೆದ, ಕೆಲವೇ ವರ್ಷಗಳ ಕೆಳಗೆ ತನ್ನೆದುರು ಏನೂ ಅಲ್ಲದ ಜನಗಳು ತಾನು ಸೋತ ವಿಷಯಗಳಲ್ಲೆಲ್ಲಾ ಗೆದ್ದು ತನ್ನೆದುರೇ ಚೆಂದದ ಬದುಕನ್ನು ಬದುಕುವಾಗ ಆಗುವ ನಿರಾಸೆ, ನೋವು, ತನ್ನ ಪರಿಸ್ಥಿತಿಯ ವಿರುದ್ಧ ಹುಟ್ಟುವ ಆಕ್ರೋಶ ಒಳಗೇ ಜ್ವಾಲಾಮುಖಿಯಂತೆ ಕುದಿಯುತ್ತಾ ತನ್ನ ಕೆನ್ನಾಲಿಗೆ ಚಾಚಿ ದಹಿಸತೊಡಗಿ ಮಾನಸಿಕವಾಗಿ ಇನ್ನಷ್ಟು ಸಾಯಿಸಿಬಿಡುತ್ತದೆ. ಕೆಲವರನ್ನು ದೈಹಿಕವಾಗಿಯೂ ಕೊಲ್ಲುತ್ತದೆ.


ಪದೇ ಪದೆ ಸೋಲುವವನಿಗೆ ನಡುವಿನಲ್ಲಿ ಒಂದಾದರೂ ಗೆಲುವು ದಕ್ಕಬೇಕು. ಕನಿಷ್ಟ ಮತ್ತೆ ಎದುರಾಗುವ ಸೋಲಿನೊಡನೆ ಹೆಣಗಲಿಕ್ಕಾದರೂ ಕಸುವು ಸಿಗಬೇಕು...


Comments

Popular posts from this blog

ಆಹಾ...! ಚಗಳಿ ಚಟ್ನಿ!!

 ಮಲೆನಾಡು ಹೇಗೆ ಹಸಿರಿಗೆ, ಸ್ವರ್ಗಸಮಾನ ಬೌಗೋಳಿಕ ರಚನೆಗೆ, ವಿಭಿನ್ನ- ವಿಶಿಷ್ಟ ಸಂಸ್ಕೃತಿಗೆ ಪ್ರಸಿದ್ದವೋ ಹಾಗೆಯೇ ವಿಶಿಷ್ಟ ಆಹಾರ ಪದ್ದತಿಗೂ ಪ್ರಸಿದ್ಧಿ.  ಮಲೆನಾಡಿನ ಋತುಮಾನಕ್ಕನುಗುಣವಾದ ಆಹಾರಗಳು ಸ್ಥಳೀಯ ಬದುಕಿನ ಅವಿಭಾಜ್ಯ ಅಂಗ. ಈ ಆಹಾರಗಳು ಕೇವಲ ನಾಲಿಗೆ ರುಚಿಗೆ ಮಾತ್ರ ಸೀಮಿತವಾಗದೇ ಮಲೆನಾಡಿಗರ ಆರೋಗ್ಯದ ಸಮತೋಲನಕ್ಕೂ ಅಪರಿಮಿತ ಕೊಡುಗೆ ನೀಡುತ್ತವೆ. ಇಲ್ಲಿ ಕಾಲಕ್ಕೆ ತಕ್ಕಂತೆ ಆಹಾರ ಕ್ರಮವಿದೆ, ಮಳೆಗಾಲಕ್ಕೊಂದು, ಚಳಿಗಾಲಕ್ಕೊಂದು, ಬೇಸಿಗೆಗೊಂದು ಖಾದ್ಯಗಳಿವೆ, ಅವನ್ನು ಆಯಾ ಕಾಲದಲ್ಲಿಯೇ ತಿನ್ನಬೇಕು. ಏಡಿ, ಕಳಲೆ, ಗದ್ದೆಮೀನು, ಕೆಸು, ಕೆಸುವಿನ ಗೆಡ್ಡೆ , ಅಣಬೆ, ಕಾಡುಗೆಣಸು, ಕಾಡು ಸೊಪ್ಪುಗಳು... ಹೀಗೆ.  ಅದೇ ರೀತಿ ಈ ಚಗಳಿಯ ಚಟ್ನಿ ಕೂಡಾ ನಮ್ಮ ಪ್ರಾಚೀನ ಆಹಾರ ಪದ್ದತಿಯ ಅತಿಮುಖ್ಯ ಖಾದ್ಯ.  ಚಗಳಿ(ಕೆಂಪು ಇರುವೆ) ಅಂದಾಕ್ಷಣ ಹಲವಾರು ಜನ 'ವ್ಯಾಕ್..' ಎಂದು ಮುಖ ಸಿಂಡರಿಸುವುದುಂಟು ಆದರೆ ಅದರ ರುಚಿ ಮತ್ತು ಔಷಧೀಯ ಗುಣಗಳನ್ನು ಮಲೆನಾಡಿಗರು ಮಾತ್ರ ಬಲ್ಲರು. ಬಿಸಿಲು ಏರುವ ಮೊದಲೇ ಜೋಪಾನವಾಗಿ ಮರದಿಂದ ಇಳಿಸಿದ ಚಗಳಿ ಕೊಟ್ಟೆಯನ್ನು ( ಗೂಡು) ಹುರಿದು ಚಟ್ನಿ ಮಾಡುವ ಮಲೆನಾಡಿನ ಮಹಿಳೆಯರ ಕೈಚಳಕಕ್ಕೆ ಅವರೇ ಸಾಟಿ. ಗದಗುಟ್ಟಿಸುವ ಚಳಿಗಾಲದಲ್ಲಿನ ಮಾಮೂಲಿ ಖಾಯಿಲೆಗಳಾದ ಶೀತ, ಜ್ವರ, ವೃದ್ಧರ ಕಫ ಮತ್ತು ಹಲವು ಸಮಸ್ಯೆಗಳಿಗೆ ಈ ಚಟ್ನಿ ರಾಮಬಾಣ.  ಅಯ್ಯೋ ಇರುವೆನೂ ತಿಂತೀರಾ... ! ಅಂತಾ ರಾಗ ಎಳ...

ಹುಲಿ ಬಂತು ಹುಲಿ

ನನ್ನೂರಿನ ಸರಹದ್ದಿನ ತೋಟವೊಂದಕ್ಕೆ ಹುಲಿ ಬಂದ ಬಗ್ಗೆ ಸುದ್ದಿಯೊಂದು ನಿನ್ನೆ ನಮ್ಮ ವಾಟ್ಸಾಪ್ ಗ್ರೂಪ್'ಗೆ ಬಂದಿತ್ತು. ಕಾಕತಾಳೀಯವೆಂಬಂತೆ ನಾನು ಅದೇ ಹೊತ್ತಿನಲ್ಲಿ ಮಲೆಗಳಲ್ಲಿ ಮದುಮಗಳು ಮಹಾ ಕಾವ್ಯದಲ್ಲಿನ ನಾಯಿಗುತ್ತಿ ದಾರಿಯಲ್ಲೆದುರಾದ ಹುಲಿಯನ್ನು ಓಡಿಸುವ ಪ್ರಸಂಗವನ್ನು ಓದುತ್ತಿದ್ದೆ! ಹುಲಿಯನ್ನು ಬೆದರಿಸಿ ಓಡಿಸಿದ ನಂತರ ಗುತ್ತಿ ಮಾಮೂಲಿಯಾಗಿ ಹೆಜ್ಜೆ ಹಾಕುತ್ತಾನೆ.  ಹುಲಿಯೂ ಕೂಡಾ ಪರಿಸರದ ಉಳಿದೆಲ್ಲಾ ಪ್ರಾಣಿಗಳಂತೆ ಒಂದು ಪ್ರಾಣಿ ಅಷ್ಟೇ ಎಂಬಂತೆ. ಅವತ್ತಿನ ಕಾಲಕ್ಕೆ ಅದು ನಿಜ ಕೂಡಾ.... ಒಂಚೂರು ಹೆಚ್ಚಿನ ಕಿರಿಕಿರಿಯ ಪ್ರಾಣಿ ಅಷ್ಟೇ.!   ಮನೆಯ ಪಕ್ಕದ ಹಟ್ಟಿಗೇ ಬಂದು ದನ ಮುರಿಯುತ್ತಿದ್ದ ಹುಲಿಯ ಕತೆಯನ್ನು ದಳಿಮನೆಯ ದೊಡ್ಡ ಕುರ್ಚಿಯಲ್ಲಿ ಕುಳಿತು ಅಜ್ಜಿ ತಣ್ಣಗೆ ಹೇಳುವಾಗ ಕೇಳುತ್ತಿದ್ದ ನಮಗೆ ಕೂದಲೆಲ್ಲಾ ನೆಟ್ಟಗಾಗುವಂಥಾ ರೋಮಾಂಚನ. ಕತೆ ಮುಂದುವರಿದಂತೆ ಗಳಿಗೆಗೊಮ್ಮೆ ದಳಿಯಾಚೆಯ ಕತ್ತಲಿನೊಳಕ್ಕೆ ಒಮ್ಮೆ ದೀರ್ಘವಾಗಿ ಹೊಕ್ಕು ಹುಡುಕುತ್ತಿದ್ದೆವು. ಹುಲಿ ಹೊರಗೆಲ್ಲಾದರೂ ಅವಿತು ಕುಳಿತು ಅಜ್ಜಿಯ ಕಥೆಗೆ ಕಿವಿಗಿವಿ ಕೊಡುತ್ತಿದೆಯೇನೋ ಎಂಬ ಅವ್ಯಕ್ತ ಅನುಮಾನ ನಮಗೆ.! ಮಲೆನಾಡಿನ ಹಳೆಯ ಬಹುತೇಕ ಕತೆಗಳು ಹುಲಿಯೊಂದಿಗೇ ಮಿಳಿತವಾಗಿರುತ್ತಿತ್ತು. ಆದರೆ ಎಂದಿಗೂ ಹುಲಿ ಬಂತೆಂದು ಊರು ಬಿಟ್ಟ, ತೋಟ ಗದ್ದೆಗೆ ಹೋಗುವುದನ್ನು ಬಿಟ್ಟ ಉದಾಹರಣೆಗಳು ಇಲ್ಲವೇ ಇಲ್ಲ. ಹೆಚ್ಚೆಂದರೆ ಹುಲಿ ಕಾಟ ಮಿತಿಮೀರಿದರೆ ಕೋವಿ...

Coffee culture V/S Coffee industry

 Coffee blossoms in Brazil. An anti Nature cultivation.  ಕೆಲವು ವರ್ಷಗಳ ಹಿಂದೆ ನಮ್ಮ ಚಿಕ್ಕಮಗಳೂರಿನ ಸುತ್ತಮುತ್ತಲಿನಲ್ಲಿ ಕೆಲವರು ಬ್ರೆಜಿಲ್ ಮಾದರಿಯ ಕಾಫಿ ಬೆಳೆಯುತ್ತೇವೆಂದು ಓಡಾಡತೊಡಗಿದರು. ಬ್ರೆಜಿಲ್ ಮಾದರಿಯಲ್ಲಿ ಕಡಿಮೆ ಖರ್ಚು, ಕಾರ್ಮಿಕರಹಿತವಾಗಿ ಯಂತ್ರಗಳ ಮೂಲಕ ಕುಯ್ಲು ಹಾಗೂ ಕಂಡು ಕೇಳರಿಯದಷ್ಟು ಇಳುವರಿಯಂತೆ...! ಎಂಬೆಲ್ಲಾ ಮಾತುಗಳು ಹರಿದಾಡತೊಡಗಿದವು.  ಬ್ರೆಜಿಲ್ ಮಾದರಿಯೆಂದರೆ ಹೆಂಗೆ ಬೆಳೆಯುತ್ತಾರೆ !?  ಒಮ್ಮೆ ಹೋಗಿ ನೋಡಬೇಕೆಂಬ  ಕುತೂಹಲ ಪ್ರಾರಂಭವಾಯಿತು.  ಒಂದು ದಿನ ಕಳಸಕ್ಕೆ ಹೋಗುತ್ತಿರುವಾಗ ಬಾಳೆಹೊಳೆಯ ಬಳಿ ತುಂಬಾ ಹಳೆಯ ರೋಬಸ್ಟಾ ತೋಟವೊಂದನ್ನು ಮರಗಳ ಸಮೇತ ಕಡಿದು ಬಟಾಬಯಲಾಗಿಸಿ ಸಾಲು ಸಾಲು ಪಾತಿಗಳಂತೆ   ಮಾಡಿ ಒಂದರ ಪಕ್ಕ ಒಂದರಂತೆ ಗಿಡಗಳನ್ನು ನೆಟ್ಟು ಹನಿ ನಿರಾವರಿ ಪೈಪುಗಳನ್ನು ಎಳೆಯುತ್ತಿದ್ದರು. ನೋಡಲು ಒಂದು ನಮೂನೆಯ ಟೀ ತೋಟದ ಮಾದರಿಯಲ್ಲಿತ್ತು. ಚಹಾ ತೋಟದಲ್ಲಾದರೂ ನಡುವೆ ಅಲ್ಲಲ್ಲಿ ಮರಗಳಿರುತ್ತವೆ ಇಲ್ಲಿ ಒಂದೇ ಒಂದು ಮರವನ್ನೂ ಬಿಡದಂತೆ ಕಡಿದುಹಾಕಿದ್ದರು.! ತೋಟದ ಸಮೀಪದಲ್ಲಿದ್ದ ಅಂಗಡಿಯೊಂದರಲ್ಲಿ, ಇದೇನು ಬೆಳೆಸುತ್ತಿದ್ದಾರೆ ? ಎಂದು ವಿಚಾರಿಸಿದೆ. 'ಎಂತದಾ ಬ್ರೆಜಿಲ್ ಕಾಪಿ ಬೆಳಿತಾರಂತೆ ಮಾರ್ರೆ ಭಯಂಕರ ಕಾಪಿ ಬಿಡ್ತದಂತೆ ಇನ್ಮೇಲೆ ಮಿಸಿನ್ನಲ್ಲಿ ಹಣ್ ಕುಯ್ಯದಂತೆ' ಎಂದರು. ಕೆಲವೇ ದಿನಗಳ ಹಿಂದೆ ಯಾವ ಬ್ರೆಜಿಲ್ ಮಾದರಿಯನ್ನು ನೋಡಬೇಕೆ...