Skip to main content

 ಅಳಿವಿನಂಚಿನಲ್ಲಿರುವ ಪಕ್ಷಿ ಹಾಗೂ ಅದರ ಕುಟುಂಬವನ್ನು ಉಳಿಸಿಕೊಳ್ಳಲು ತಮಿಳುನಾಡಿನ ಶಿವಗಂಗೈ ಜಿಲ್ಲೆಯ ಹಳ್ಳಿಯೊಂದು 36 ದಿನಗಳ ಕಾಲ ಕತ್ತಲೆಯಲ್ಲಿ ಬದುಕಿದ ಹೃದಯ ದೃವಿಸುವಂತಹ ಮಹೋನ್ನತ ಘಟನೆಯಿದು. 

 

 ಗುಬ್ಬಚ್ಚಿಯೊಂದು ಗ್ರಾಮದ ಬೀದಿ ದೀಪಗಳ ಮುಖ್ಯ ಸ್ವಿಚ್‌ಬೋರ್ಡ್‌ನಲ್ಲಿ ಮೊಟ್ಟೆಯಿಟ್ಟಿತ್ತು. ಗುಬ್ಬಿಯು ಸುಗಮವಾಗಿ ಕಾವುಕೊಟ್ಟು ಮೊಟ್ಟೆಯೊಡೆದು ಮರಿಗಳು ಹೊರಬರಲು ಅನುವು ಮಾಡಿಕೊಡುವ ಸಲುವಾಗಿ ಜನರು ಬೀದಿ ದೀಪಗಳಿಲ್ಲದೆ ಕೆಲವು ದಿನಗಳನ್ನು ಸಾಗಿಸಲು ನಿರ್ಧರಿಸಿದರು.

 ಮೊಟ್ಟೆ ಮರಿಗಳಾಗುವವರೆಗೆ ದೀಪಗಳನ್ನು ಉರಿಸದೇ ಇರುವ ಪರಿಕಲ್ಪನೆಯು ಆ ಗ್ರಾಮದ  20 ವರ್ಷದ ವಿದ್ಯಾರ್ಥಿಯದ್ದು. ಆರಂಭದಲ್ಲಿ ಗುಬ್ಬಚ್ಚಿ ಮತ್ತು ಅದರ ಮೊಟ್ಟೆಗಳನ್ನು ಗಮನಿಸಿದ್ದ ಆ ವಿದ್ಯಾರ್ಥಿ, ಸ್ವಿಚ್ ಬೋರ್ಡಿನೊಳಗಿದ್ದ ಆ ಗೂಡು ಹಾಗೂ ಮೊಟ್ಟೆಗಳ ಫೋಟೋ ತೆಗೆದು ಸುಮಾರು ನೂರು ಕುಟುಂಬಗಳಿರುವ ಆ ಗ್ರಾಮದ ವಾಟ್ಸಾಪ್ ಗುಂಪಿಗೆ ಕಳುಹಿಸಿ, ಮೊಟ್ಟೆಯೊಡೆದು ಮರಿಗಳು ಹೊರಬರುವವರೆಗೂ ಆ ಬೋರ್ಡಿಗೆ ಸಂಪರ್ಕ ಹೊಂದಿರುವ ಬೀದಿದೀಪಗಳನ್ನು ಬಳಸದೇ ಇರಲು ಮನವಿ ಮಾಡಿದ. ಆತನ ಮನವಿಗೆ ಇಡೀ ಗ್ರಾಮ ಓಗೊಟ್ಟು ಮರಿಗಳು ಹೊರಬರುವವರೆಗೂ  ಕತ್ತಲಿನಲ್ಲಿಯೇ ದಿನದೂಡಲು ನಿರ್ಧರಿಸಿತು. ಗ್ರಾಮದ ಒಗ್ಗಟ್ಟಿನ ನಿರ್ಧಾರದ ಫಲವಾಗಿ ಮೂವತ್ತಾರು ದಿನಗಳ ಕಾಲ ಬೀದಿ ದೀಪಗಳು ಸ್ಥಬ್ದವಾದವು. ರಾತ್ರಿಹೊತ್ತು ಬೆಳಕಿಲ್ಲದೇ ಹೊರಹೋಗಲು ಭಯಪಡುತ್ತಿದ್ದ ಮಹಿಳೆಯರೂ ಕೂಡಾ ಗುಬ್ಬಿಯ ಕುಟುಂಬಕ್ಕಾಗಿ ಮನಸ್ಸನ್ನು ಗಟ್ಟಿಗೊಳಿಸಿಕೊಂಡು ಬೀದಿ ದೀಪಗಳನ್ನು ಆರಿಸಲು ಒಪ್ಪಿಕೊಂಡರು. ಪ್ರತಿಯೊಬ್ಬರ ಮಾನವೀಯತೆಯ  ಫಲವಾಗಿ ಗುಬ್ಬಿ ಮರಿಗಳು ಯಾವುದೇ ತೊಂದರೆಯಿಲ್ಲದೇ ಹೊರಬರಲು ಸಾಧ್ಯವಾಯಿತು. 

ಇದು ಸಾಮಾಜಿಕ ಮಾಧ್ಯಮದ ಶಕ್ತಿ ಹಾಗೂ ಪ್ರಕೃತಿಯ ಉಳಿವಿಗಾಗಿ ಇರಬೇಕಾದ ಮಾನವೀಯತೆಯ ಹೆಗ್ಗುರುತು. 

ಇಂಡಿಯಾ ಟುಡೆಯಲ್ಲಿ ಬಂದಿದ್ದ ಲೇಖನವನ್ನು ಓದಿ ನಾನು ನಿಜಕ್ಕೂ ಕಳೆದುಹೋದೆ. ಈ ಮನ ಕರಗಿಸುವ ವಿಚಾರ ಮತ್ತೊಂದಷ್ಟು ಜನರನ್ನು ತಲುಪಲೆಂದು ಭಾಷಾಂತರಿಸುವ ಸಣ್ಣ ಪ್ರಯತ್ನ.









Comments

Popular posts from this blog

Coffee culture V/S Coffee industry

 Coffee blossoms in Brazil. An anti Nature cultivation.  ಕೆಲವು ವರ್ಷಗಳ ಹಿಂದೆ ನಮ್ಮ ಚಿಕ್ಕಮಗಳೂರಿನ ಸುತ್ತಮುತ್ತಲಿನಲ್ಲಿ ಕೆಲವರು ಬ್ರೆಜಿಲ್ ಮಾದರಿಯ ಕಾಫಿ ಬೆಳೆಯುತ್ತೇವೆಂದು ಓಡಾಡತೊಡಗಿದರು. ಬ್ರೆಜಿಲ್ ಮಾದರಿಯಲ್ಲಿ ಕಡಿಮೆ ಖರ್ಚು, ಕಾರ್ಮಿಕರಹಿತವಾಗಿ ಯಂತ್ರಗಳ ಮೂಲಕ ಕುಯ್ಲು ಹಾಗೂ ಕಂಡು ಕೇಳರಿಯದಷ್ಟು ಇಳುವರಿಯಂತೆ...! ಎಂಬೆಲ್ಲಾ ಮಾತುಗಳು ಹರಿದಾಡತೊಡಗಿದವು.  ಬ್ರೆಜಿಲ್ ಮಾದರಿಯೆಂದರೆ ಹೆಂಗೆ ಬೆಳೆಯುತ್ತಾರೆ !?  ಒಮ್ಮೆ ಹೋಗಿ ನೋಡಬೇಕೆಂಬ  ಕುತೂಹಲ ಪ್ರಾರಂಭವಾಯಿತು.  ಒಂದು ದಿನ ಕಳಸಕ್ಕೆ ಹೋಗುತ್ತಿರುವಾಗ ಬಾಳೆಹೊಳೆಯ ಬಳಿ ತುಂಬಾ ಹಳೆಯ ರೋಬಸ್ಟಾ ತೋಟವೊಂದನ್ನು ಮರಗಳ ಸಮೇತ ಕಡಿದು ಬಟಾಬಯಲಾಗಿಸಿ ಸಾಲು ಸಾಲು ಪಾತಿಗಳಂತೆ   ಮಾಡಿ ಒಂದರ ಪಕ್ಕ ಒಂದರಂತೆ ಗಿಡಗಳನ್ನು ನೆಟ್ಟು ಹನಿ ನಿರಾವರಿ ಪೈಪುಗಳನ್ನು ಎಳೆಯುತ್ತಿದ್ದರು. ನೋಡಲು ಒಂದು ನಮೂನೆಯ ಟೀ ತೋಟದ ಮಾದರಿಯಲ್ಲಿತ್ತು. ಚಹಾ ತೋಟದಲ್ಲಾದರೂ ನಡುವೆ ಅಲ್ಲಲ್ಲಿ ಮರಗಳಿರುತ್ತವೆ ಇಲ್ಲಿ ಒಂದೇ ಒಂದು ಮರವನ್ನೂ ಬಿಡದಂತೆ ಕಡಿದುಹಾಕಿದ್ದರು.! ತೋಟದ ಸಮೀಪದಲ್ಲಿದ್ದ ಅಂಗಡಿಯೊಂದರಲ್ಲಿ, ಇದೇನು ಬೆಳೆಸುತ್ತಿದ್ದಾರೆ ? ಎಂದು ವಿಚಾರಿಸಿದೆ. 'ಎಂತದಾ ಬ್ರೆಜಿಲ್ ಕಾಪಿ ಬೆಳಿತಾರಂತೆ ಮಾರ್ರೆ ಭಯಂಕರ ಕಾಪಿ ಬಿಡ್ತದಂತೆ ಇನ್ಮೇಲೆ ಮಿಸಿನ್ನಲ್ಲಿ ಹಣ್ ಕುಯ್ಯದಂತೆ' ಎಂದರು. ಕೆಲವೇ ದಿನಗಳ ಹಿಂದೆ ಯಾವ ಬ್ರೆಜಿಲ್ ಮಾದರಿಯನ್ನು ನೋಡಬೇಕೆ...
 ಬೆಂಗಳೂರಿಗೆ ಹೊರಡುವ ಬಹುತೇಕ ನಿರುದ್ಯೋಗಿಗಳ ಚಿಂತೆ ಕೆಲಸ ಸಿಗುತ್ತದಾ ?  ಎನ್ನುವುದಕ್ಕಿಂತ ಉಳಿಯಲು ಕೊಠಡಿ ಸಿಗುತ್ತದಾ ? ಎನ್ನುವುದು. ಕಾರಣ ಪುಡಿಗಾಸು ಇಟ್ಟುಕೊಂಡು ಹೊರಡುವ ಹುಡುಗರು (ಬಹುತೇಕ ಹುಡುಗಿಯರು ಅದರಲ್ಲಿ ಜಾಣೆಯರು. ಕೆಲಸ , ಕೋಣೆಯನ್ನು  ಖಚಿತ ಪಡಿಸಿಕೊಂಡೇ ಹೊರಡುತ್ತಾರೆ.! ) ಸ್ವಂತದ ಕೋಣೆ ಬಾಡಿಗೆ ಪಡೆಯುವಷ್ಟು ಶಕ್ತಿಯಿರುವುದಿಲ್ಲ. ಹಾಗಾಗಿ ಬೆಂಗಳೂರಿಗೆ ಕೆಲಸ ಹುಡುಕಿ ಹೊರಡುವುದು ಒಂದು ರೀತಿಯ ಅನಿಶ್ಚಿತತೆಯ ಪ್ರಯಾಣ. ಇನ್ನು ಈ ಪ್ರಾಣಿ ಬೆಂಗಳೂರಿಗೆ ಕೆಲಸ ಹುಡುಕಿಕೊಂಡು ಬಂದಿದೆ ಎಂಬ ಮಾಹಿತಿ ಮೊದಲೇ ಬೆಂಗಳೂರಿಗೆ ಹೋಗಿ ಸೇರಿಕೊಂಡವರಿಗೆ ತಿಳಿದರೆ ಅವರು ಸತ್ತರೂ ಫೋನ್ ರಿಸೀವ್ ಮಾಡುವುದಿಲ್ಲ.  ಇನ್ನು ಕೆಲವರು ಕರೆ ಮಾಡಿದಾಗಲೆಲ್ಲಾ ರೂಮಿಗೇ ಬರದೇ ಹಗಲೂ ರಾತ್ರಿ ಡ್ಯೂಟಿ ಮಾಡುತ್ತಲೇ ಇರುತ್ತಾರೆ.!  ಬಹುತೇಕ ಹುಡುಗರಿಗೆ ಸುಳ್ಳಿನ ಸರಪಳಿ ಅನಿವಾರ್ಯವಾಗಿದ್ದರೆ ಇನ್ನು ಕೆಲವರಿಗೆ ಊರಿನ ಮತ್ತೊಂದು ಮಿಕ ಬೆಂಗಳೂರು ಸೇರಿ ಉದ್ದಾರಾಗುವುದು ಹೊಟ್ಟೆ ಉರಿಯ ಮ್ಯಾಟರ್ರು.  ಬೆಂಗಳೂರಿಗೆ ಹೋದ ಹೊಸತು. ಹೋಗುವ ಮೊದಲು ನಾಗಮಂಗಲ ಕಡೆಯ ಗೆಳೆಯನೊಬ್ಬನ ಕೋಣೆಯನ್ನು ಖಚಿತ ಪಡಿಸಿಕೊಂಡಿದ್ದೆ. 'ಅಯ್ಯೋ ಬಾ ಮಗಾ ನಾನಿದೀನಿ...' ಎಂದು ಥೇಟ್ ಕೃಷ್ಣ ಪರಮಾತ್ಮನ ಶೈಲಿಯಲ್ಲಿ ಅಭಯ ನೀಡಿದ್ದ. ಹೋಗಿ  ಇಳಿದ ನಂತರ ಆ ದರವೇಸಿಗೆ ಅದೇನಾಯ್ತೋ ಮುಖ ಗಂಟು ಹಾಕಿಕೊಂಡೇ ಸುಂಕದ ಕಟ್ಟೆಯಾಚೆಗಿನ ಅವನ ಮನ...

ಕೀಟ ಸಾಮ್ರಾಜ್ಯ ಹಾಗೂ ಆಧುನಿಕ ಕೃಷಿ

 ಮೊನ್ನೆ ಸಹಜ ಕೃಷಿ ಪದ್ಧತಿಯಲ್ಲಿ ಅಡಿಕೆ ಬೆಳೆಯುತ್ತಿರುವ ಶ್ರೀಯುತ. ಚಂದ್ರಶೇಖರ್ ಅವರ ತೋಟಕ್ಕೆ ಹೋಗಿದ್ದೆ. ಜೀವಾಮೃತವನ್ನಷ್ಟೇ ಬಳಸುತ್ತಿರುವ ಅವರು ಹನ್ನೆರಡು ವರ್ಷಗಳಿಂದ ಮಣ್ಣಿಗೆ ರಾಸಾಯನಿಕ ಗೊಬ್ಬರವನ್ನೇ ಸೋಕಿಸಿಲ್ಲವಂತೆ. ಆದರೂ ಸಹ ಇತರೇ ಬೆಳೆಗಾರರಿಗಿಂತ 20-30% ಹೆಚ್ಚು ಫಸಲು ತೆಗೆಯುತ್ತಿದ್ದಾರಂತೆ. ಅಡಿಕೆಯ ನಡುವೆ  ಬೆಳೆದಿರುವ ಎರಡು ವರ್ಷ ವಯಸ್ಸಿನ ರೋಬಸ್ಟಾ ಕಾಫಿ ಗಿಡಗಳು ನಾಲ್ಕು ವರ್ಷದ ಗಿಡಗಳಂತೆ ಬೆಳೆದಿವೆ.  ಕಳೆ, ಕೀಟ ನಾಶಕಗಳನ್ನು ಬಳಸುವುದರಿಂದ ಕೇವಲ‌ ಕಳೆಯನ್ನಷ್ಟೇ ಅಲ್ಲ, ಕೀಟ ಜಗತ್ತನ್ನೇ ಸರ್ವನಾಶ ಮಾಡುತ್ತಿದ್ದೇವೆನ್ನುವ ಕಿಂಚಿತ್ತು ಅರಿವಿಲ್ಲದ ರೈತರ ಬಗ್ಗೆ ಅವರು ಆತಂಕಗೊಂಡರು.  ನಾನು ಬರೆದಿರುವುದನ್ನು ಓದುವ ಕೃಷಿಕರು ಒಂದು ಕ್ಷಣ ಆಲೋಚಿಸಿ ನೋಡಿ. ರಾಸಾಯನಿಕ ವಿಷವನ್ನು ಬಳಸಿ ನಾವು ಕೊಲ್ಲುತ್ತಿರುವುದಾದರೂ ಯಾವುದನ್ನು!?  ಕಳೆಗೆ ಸಿಂಪಡಿಸುವ ರಾಸಾಯನಿಕವು ಕಳೆಯಿಂದ ನೆಲಕ್ಕಿಳಿದು ಕಣ್ಣಿಗೆ ಕಾಣದ, ಜೀವ ವೈವಿಧ್ಯದ ಅಮೂಲ್ಯ ಭಾಗವಾದ ಲಕ್ಷಾಂತರ, ಕೋಟ್ಯಾಂತರ ಕ್ರಿಮಿ, ಕೀಟಗಳನ್ನು ಅನಾಮತ್ತು ಕೊಲ್ಲುತ್ತಿರುವುದರ ಬಗ್ಗೆ ಔಷಧಿಯ ಹೆಸರಿನಲ್ಲಿ ಹಣ್ಣು, ಸೊಪ್ಪು, ತರಕಾರಿಯಿಂದ್ಹಿಡಿದು ತಿನ್ನುವ ಅನ್ನಕ್ಕೂ ವಿಷವಿಕ್ಕುತ್ತಿರುವ ನಾವು ಯೋಚಿಸಿದ್ದೇವೆಯಾ ? ಯೋಚಿಸುತ್ತೇವೆಯಾ ?  ನಾವು ಔಷಧವೆಂದು ಬಳಸುತ್ತಿರುವ ರಾಸಾಯನಿಕವು ಔಷಧಿಯೇ ಆಗಿದ್ದಿದ್ದಲ್ಲಿ ನಮ್ಮ ತೋಟ, ನಮ್ಮ ಹೊ...