Skip to main content

Posts

Showing posts from May, 2021
 ಬೆಂಗಳೂರಿಗೆ ಹೊರಡುವ ಬಹುತೇಕ ನಿರುದ್ಯೋಗಿಗಳ ಚಿಂತೆ ಕೆಲಸ ಸಿಗುತ್ತದಾ ?  ಎನ್ನುವುದಕ್ಕಿಂತ ಉಳಿಯಲು ಕೊಠಡಿ ಸಿಗುತ್ತದಾ ? ಎನ್ನುವುದು. ಕಾರಣ ಪುಡಿಗಾಸು ಇಟ್ಟುಕೊಂಡು ಹೊರಡುವ ಹುಡುಗರು (ಬಹುತೇಕ ಹುಡುಗಿಯರು ಅದರಲ್ಲಿ ಜಾಣೆಯರು. ಕೆಲಸ , ಕೋಣೆಯನ್ನು  ಖಚಿತ ಪಡಿಸಿಕೊಂಡೇ ಹೊರಡುತ್ತಾರೆ.! ) ಸ್ವಂತದ ಕೋಣೆ ಬಾಡಿಗೆ ಪಡೆಯುವಷ್ಟು ಶಕ್ತಿಯಿರುವುದಿಲ್ಲ. ಹಾಗಾಗಿ ಬೆಂಗಳೂರಿಗೆ ಕೆಲಸ ಹುಡುಕಿ ಹೊರಡುವುದು ಒಂದು ರೀತಿಯ ಅನಿಶ್ಚಿತತೆಯ ಪ್ರಯಾಣ. ಇನ್ನು ಈ ಪ್ರಾಣಿ ಬೆಂಗಳೂರಿಗೆ ಕೆಲಸ ಹುಡುಕಿಕೊಂಡು ಬಂದಿದೆ ಎಂಬ ಮಾಹಿತಿ ಮೊದಲೇ ಬೆಂಗಳೂರಿಗೆ ಹೋಗಿ ಸೇರಿಕೊಂಡವರಿಗೆ ತಿಳಿದರೆ ಅವರು ಸತ್ತರೂ ಫೋನ್ ರಿಸೀವ್ ಮಾಡುವುದಿಲ್ಲ.  ಇನ್ನು ಕೆಲವರು ಕರೆ ಮಾಡಿದಾಗಲೆಲ್ಲಾ ರೂಮಿಗೇ ಬರದೇ ಹಗಲೂ ರಾತ್ರಿ ಡ್ಯೂಟಿ ಮಾಡುತ್ತಲೇ ಇರುತ್ತಾರೆ.!  ಬಹುತೇಕ ಹುಡುಗರಿಗೆ ಸುಳ್ಳಿನ ಸರಪಳಿ ಅನಿವಾರ್ಯವಾಗಿದ್ದರೆ ಇನ್ನು ಕೆಲವರಿಗೆ ಊರಿನ ಮತ್ತೊಂದು ಮಿಕ ಬೆಂಗಳೂರು ಸೇರಿ ಉದ್ದಾರಾಗುವುದು ಹೊಟ್ಟೆ ಉರಿಯ ಮ್ಯಾಟರ್ರು.  ಬೆಂಗಳೂರಿಗೆ ಹೋದ ಹೊಸತು. ಹೋಗುವ ಮೊದಲು ನಾಗಮಂಗಲ ಕಡೆಯ ಗೆಳೆಯನೊಬ್ಬನ ಕೋಣೆಯನ್ನು ಖಚಿತ ಪಡಿಸಿಕೊಂಡಿದ್ದೆ. 'ಅಯ್ಯೋ ಬಾ ಮಗಾ ನಾನಿದೀನಿ...' ಎಂದು ಥೇಟ್ ಕೃಷ್ಣ ಪರಮಾತ್ಮನ ಶೈಲಿಯಲ್ಲಿ ಅಭಯ ನೀಡಿದ್ದ. ಹೋಗಿ  ಇಳಿದ ನಂತರ ಆ ದರವೇಸಿಗೆ ಅದೇನಾಯ್ತೋ ಮುಖ ಗಂಟು ಹಾಕಿಕೊಂಡೇ ಸುಂಕದ ಕಟ್ಟೆಯಾಚೆಗಿನ ಅವನ ಮನ...